ದ್ವಾರಕಾ ಪ್ರತಿಷ್ಠಾನ ಮತ್ತು ಯಕ್ಷದೀವಿಗೆ ತುಮಕೂರು ವತಿಯಿಂದ “ಚಿಣ್ಣರ ಉದ್ಯಾನವನ” ದಲ್ಲಿ “ಚಂದ್ರಮಂಡಲ ಚರಿತೆ”

0

ಪುತ್ತೂರು : ದ್ವಾರಕಾ ಕಾರ್ಪೊರೇಷನ್ ಪ್ರೈ. ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ಮತ್ತು ಯಕ್ಷದೀವಿಗೆ ತುಮಕೂರು ಸಹಯೋಗದಲ್ಲಿ ಪುತ್ತೂರು ನಗರದ “ಚಿಣ್ಣರ ಉದ್ಯಾನ” ದಲ್ಲಿ “ಚಂದ್ರಮಂಡಲ ಚರಿತೆ” ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಉದ್ಘಾಟಿಸಿ, ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ಮತ್ತು ಸಂಸ್ಥೆಯ ಕಾರ್ಯದರ್ಶಿ ಗಣರಾಜ ಕುಂಬ್ಳೆ ಸಭೆಯಲ್ಲಿ ಉಪಸ್ಥಿತರಿದ್ದು ಪುತ್ತೂರು ನಗರದಲ್ಲಿರುವ ಉದ್ಯಾನವನಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಆಶಿಸಿ ದ್ವಾರಕಾ ಪ್ರತಿಷ್ಠಾನವನ್ನು ಪ್ರಸಂಶಿಸಿದರು.

ಗಣ್ಯರನ್ನು ಸಂಸ್ಥೆಯ ಉಪಾಧ್ಯಕ್ಷ ಅಮೃತಕೃಷ್ಣ ಎನ್ ಇವರು ಸನ್ಮಾನಿಸಿದರು. ಸಭಾ ಕಾರ್ಯಕ್ರಮದ ಬಳಿಕ ಪದ್ಮನಾಭ ಸಿಬಂತಿ ಮತ್ತು ಆರತಿ ಪಟ್ರಮೆ ಇವರ ನೇತೃತ್ವದ ಯಕ್ಷದೀವಿಗೆ ತುಮಕೂರು ತಂಡದಿಂದ ಯಕ್ಷಗಾನ ಪ್ರದರ್ಶನ ನಡೆಯಿತು.


ಯಕ್ಷಗಾನದಲ್ಲಿ ಭಾಗವತರಾಗಿ ಪ್ರಶಾಂತ್ ರೈ ಮುಂಡಾಲಗುತ್ತು ಹಾಗೂ ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ, ಅವಿನಾಶ ಬೈಪಡಿತ್ತಾಯ ಮತ್ತು ಆದಿತ್ಯಕೃಷ್ಣ ದ್ವಾರಕಾ ಇವರು ಸಹಕರಿಸಿ, ಯಕ್ಷದೀವಿಗೆ ತಂಡದವರು ಮುಮ್ಮೇಳದಲ್ಲಿ ಪಾತ್ರವನ್ನು ನಿರ್ವಹಿಸಿದರು.


ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಕುಂಬ್ಳೆ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಸಿದರು. ಈ ಸಂದರ್ಭದಲ್ಲಿ ಕಲಾಭಿಮಾನಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here