ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.10 ರಂದು ಬೆಳಿಗ್ಗೆ ಗಂಟೆ 10.30ಕ್ಕೆ
ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.

ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ವೈದಿಕತ್ವದಲ್ಲಿ ಮತ್ತು ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ,ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ, ಸದಸ್ಯರಾದ ನಳಿನಿ ಪಿ ಶೆಟ್ಟಿ, ಈಶ್ವರ ಬೆಡೇಕರ್, ವಿನಯ ಸುವರ್ಣ, ದಿನೇಶ್ ಪಿ ವಿ, ಮಹಾಬಲ ರೈ ವಳತ್ತಡ್ಕ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ್ ರೈ ಮೇಗಿನಗುತ್ತು ಸಹಿತ ಭಕ್ತರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನಡೆಯಿತು.