ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಆರಾಧನಾ ಸಮಿತಿ

0

ಕುರಿಯ ಮಾಡಾವು ಏಳ್ನಾಡುಗುತ್ತು ಇವರಿಂದ ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ಳಾಡುಗುತ್ತು ಇವರಿಂದ ಶ್ರೀ ದೇವರ ಜಾತ್ರೋತ್ಸವದ ಧ್ವಜಾರೋಹಣದ ಶುಭ ದಿನವಾದ ಏ.10 ರಂದು ಪೂರ್ವಶಿಷ್ಠ ಪದ್ಧತಿಯಂತೆ ಕುರಿಯ ಮಾಡಾವು ಏಳ್ಳಾಡುಗುತ್ತು ಮನೆತನದ ಶ್ರೇಯಸ್ಸು ಹಾಗೂ ಗೌರವಾರ್ಥವಾಗಿ ಮಹಾಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಕುಟುಂಬದ ಶ್ರೇಯಸ್ಸಿಗಾಗಿ ವಿಶೇಷ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಡೆದು ಪಲ್ಲಪೂಜೆ ನಡೆಯಿತು. ದೇವಳದ ಅರ್ಚಕ ವಸಂತ ಕೆದಿಲಾಯ ರವರು ಪಲ್ಲಪೂಜೆ ನೆರವೇರಿಸಿದರು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳಾಡುಗುತ್ತು ಇದರ ಗೌರವಾಧ್ಯಕ್ಷ ಕೆ.ಎಂ.ವಿಶ್ವನಾಥ ರೈ ಮಾಡಾವು, ಸಂಚಾಲಕ ಕೆ.ಸೀತಾರಾಮ ರೈ ಕುರಿಯ, ಅಧ್ಯಕ್ಷ ಎಂ.ಬಿ.ಚೆನ್ನಪ್ಪ ರೈ ಬಳಜ್ಜ, ಪ್ರಧಾನ ಕಾರ್ಯದರ್ಶಿ ಎಸ್.ಮಾಧವ ರೈ ಕುಂಬ್ರ, ಜತೆ ಕಾರ್ಯದರ್ಶಿ ಸತೀಶ್ ರೈ ಕುರಿಯ, ಕೋಶಾಧಿಕಾರಿ ಜಯಶೀಲ ರೈ ಕುರಿಯ ಎಸ್ ಬಿ ಜಯರಾಮ ರೈ ಬಳಜ್ಜ ಕುರಿಯ ಮಾಡಾವು, ರಾಧಾಕೃಷ್ಣ ರೈ ಕುರಿಯ ಏಳ್ನಾಡುಗುತ್ತು, ಶಶಿಕಲಾ ರೈ ಕುರಿಯ ಏಳ್ನಾಡುಗುತ್ತು, ಶಿವರಾಮ ರೈ ಜಾಲ್ಸೂರು, ಮಂಜುನಾಥ ರೈ ನಂಜೆ, ಸುಚೇತಾ ಎಸ್ ಹೆಗ್ಡೆ ಕುರಿಯ, ಲೋಹಿತ್ ಭಂಡಾರಿ, ಹರ್ಷಕುಮಾರ್ ರೈ ಮಾಡಾವು, ಯತೀಶ್ ಕುಮಾರ್ ಆಳ್ವ, ವಿನೋದ್ ರೈ ಕುರಿಯ, ಮಾಡಾವು, ಪ್ರಕಾಶ್ ರೈ ಬಳಕ್ಕ, ಮೋಹನ್ ರೈ ಬೇರಿಕೆ, ಸುಗುಣ ಬಿ ಹೆಗ್ಡೆ ಸಹಿತ ಕುರಿಯ ಮಾಡಾವು ಏಳ್ನಾಡುಗುತ್ತು ಕುಟುಂಬಸ್ಥರು ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here