ಭಾರತದ ಜೂನಿಯರ್ ಮಹಿಳಾ ಕಬಡ್ಡಿ ತಂಡದ ತರಬೇತಿ ಶಿಬಿರಕ್ಕೆ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಧನ್ವಿ ಆಯ್ಕೆ

0

ರಾಮಕುಂಜ: 2025ರಲ್ಲಿ ಬೆಹ್ರೆನ್‌ನಲ್ಲಿ ನಡೆಯಲಿರುವ ಏಷ್ಯನ್ ಯೂಥ್ ಗೇಮ್ಸ್ (Asian youth Games) ನಲ್ಲಿ ಭಾಗವಹಿಸಲಿರುವ ಭಾರತದ ಜೂನಿಯರ್ ಮಹಿಳಾ ಕಬಡ್ಡಿ ತಂಡದ ತರಬೇತಿ ಶಿಬಿರಕ್ಕೆ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಧನ್ವಿ ಎಂ. ಆಯ್ಕೆಯಾಗಿದ್ದಾರೆ.


ಈಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಬಾಲಕಿಯಾಗಿದ್ದಾರೆ. ಧನ್ವಿ ಎಂ.ರವರು 2023-24ರ ರಾಷ್ಟ್ರಮಟ್ಟದ 14 ವರ್ಷದ ಬಾಲಕಿಯರ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ೨೦೨೫ರ ಮಾರ್ಚ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.
ಶಾಲಾ ಮುಖ್ಯಗುರು ಸತೀಶ್ ಭಟ್‌ರವರ ಮಾರ್ಗದರ್ಶನದಲ್ಲಿ ಮಾಧವ ಬಿ.ಕೆ., ಜಸ್ವಂತ್, ಮಂಜುನಾಥ್ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ತರಬೇತಿ ನೀಡಿದ್ದರು. ಈಕೆ ಕಡಬ ತಾಲೂಕಿನ ಕೊಣಾಜೆ ಮಣೆಜಾಲು ದುಗ್ಗಣ್ಣ ಗೌಡ ಮತ್ತು ಅಮಿತಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here