ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ (ಇಂಡಸ್ಟ್ರೀಯಲ್) ವಾಟರ್ ಸಪ್ಲೆ ಫೀಡರ್ನಲ್ಲಿ ಎ.15 ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ, ಹಳೆನೇರೆಂಕಿ, ಹಿರೇಬಂಡಾಡಿ, ನೆಕ್ಕಿಲಾಡಿ, ದಾರಂದಕುಕ್ಕು, ಸೇಡಿಯಾಪು, ಕೆಮ್ಮಾಯಿ, ಕೇಪುಳು, ಬನ್ನೂರು, ಸಾಲ್ಮರ, ಸೂತ್ರಬೆಟ್ಟು, ನೆಕ್ಕರೆ, ಚಿಕ್ಕಮುಡ್ನೂರು, ವಾಟರ್ಸಪ್ಲೈ ಮತ್ತು ಕೋಡಿಂಬಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
33/11ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ.15 ರಂದು ಪೂರ್ವಾಹ್ನ 9.30 ರಿಂದ ಸಾಯಂಕಾಲ 6.೦೦ ಗಂಟೆಯವರೆಗೆ 33/11 ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.