ಪುಣಚ: ಪುಣಚ ಗ್ರಾಂ.ಪಂ.ಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಎ.19ರಂದು ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಯುತ್ತಿತ್ತು, ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪುಣಚ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ತನ್ನಿಂದ ಸಾಧ್ಯವಾಗುವ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಶಕ್ತಿ ಕೊಡುವ ಕೆಲಸ ಮಾಡುತ್ತೇನೆ ಆ ಮೂಲಕ ಪಾರದರ್ಶಕ ಸೇವೆ ನೀಡಿ ಗ್ರಾಮದ ಅಭಿವೃದ್ಧಿಯಲ್ಲಿ ನಾವೆಲ್ಲರೂ ಸಹಕರಿಸುವಂತೆ ತಿಳಿಸಿದರು. ಗ್ರಾ.ಪಂ ಸದಸ್ಯ ರಾಮಕೃಷ್ಣ ಮೂಡಂಬೈಲು ಗ್ರಾಮದ ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯದರ್ಶಿ ಪ್ರೀತಂ ಪೂಂಜ ಅಗ್ರಾಳ, ದ.ಕ.ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಗುರುವಪ್ಪ ಪೂಜಾರಿ ದಲ್ಕಾಜೆಗುತ್ತು, ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಅಭಿವೃದ್ಧಿ ಅಧಿಕಾರಿ ರವಿ, ದ್ವೀತಿಯ ದರ್ಜೆ ಲೆಕ್ಕ ಸಹಾಯಕಿ ಪಾರ್ವತಿ, ಸದಸ್ಯರಾದ ಗಂಗಮ್ಮ, ಲಲಿತಾ, ಹರೀಶ್ ಪೂಜಾರಿ, ಉದಯಕುಮಾರ್, ಸರೋಜಿನಿ, ಸುಜಾತ, ರೇಷ್ಮಾ, ತೀರ್ಥರಾಮ, ಅಶೋಕ್ ಕುಮಾರ್, ವಾಣಿಶ್ರೀ, ರಾಜೇಶ್, ಆನಂದ ನಾಯ್ಕ, ರವಿನಾಯ್ಕ, ಶಾರದಾ ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು. ಉಪಾಧ್ಯಕ್ಷ ಮಹೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.