ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಇಂದು (ಎ.23)ಕ್ಕೆ ಸಂಜೆ ಪುತ್ತೂರು ಗಾಂಧಿಕಟ್ಟೆ ಬಳಿ ಪ್ರತಿಭಟನೆ

0

ಪುತ್ತೂರು: ಜಮ್ಮು-ಕಾಶ್ಮೀರದ ಪಹಲ್ಗಮ್ ನಲ್ಲಿ ಹಿಂದೂ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ 27 ಪ್ರವಾಸಿಗರ ಹತ್ಯೆಯಾಗಿದೆ. ಇದನ್ನು ಖಂಡಿಸಿ ಮಾತೃಭೂಮಿ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ಎ.23ರಂದು ಸಂಜೆ ಗಂಟೆ 6ಕ್ಕೆ ಪುತ್ತೂರು ಬಸ್‌ನಿಲ್ದಾಣದ ಸಮೀಪದ ಗಾಂಧಿಕಟ್ಟೆ ಬಳಿ ಪ್ರತಿಭಟನಾ ಸಭೆ ಮತ್ತು ಸಂತಾಪ ಸಭೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here