ಪುತ್ತೂರು: ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನ ವಾರ್ಷಿಕೋತ್ಸವ ಸಂಭ್ರಮದ ಪ್ರಯುಕ್ತ ಮಳಿಗೆಯ ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಗ್ರಾಹಕರಿಗೆ ‘ಜಿ.ಎಲ್.ಶಾಪಿಂಗ್ ಹಬ್ಬ-ವರುಷದ ಹರುಷ’ ಎಂಬ ವಿಶಿಷ್ಟ ಶಾಪಿಂಗ್ ಹಬ್ಬವು ಏ.13ರಿಂದ ಪ್ರಾರಂಭಗೊಂಡಿದ್ದು ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ.
ಸಂಸ್ಥೆಯು ಪ್ರತಿವರ್ಷ ತನ್ನ ವಾರ್ಷಿಕೋತ್ಸವವನ್ನು ‘ಜಿ.ಎಲ್ ಶಾಪಿಂಗ್ ಹಬ್ಬ ವರುಷದ ಹರುಷ’ಎಂಬ ವಿಶೇಷ ಕೊಡುಗೆಗಳೊಂದಿಗೆ ಆಚರಿಸುತ್ತಾ ಬಂದಿದೆ. ಪುತ್ತೂರು, ಸುಳ್ಯ ಮಾತ್ರವಲ್ಲದೆ ನೆರೆಯ ತಾಲೂಕುಗಳಲ್ಲಿಯೂ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರ ಮನೆ ಮಾತಾಗಿದ್ದು ಈ ವರ್ಷ ಇನ್ನಷ್ಟು ಕೊಡುಗೆಗಳೊಂದಿಗೆ ವರುಷದ ಹರುಷವನ್ನು ಆಚರಿಸುತ್ತಿದೆ.
ಜಿಲ್ಲೆಯ ಅತೀ ದೊಡ್ಡ ಚಿನ್ನಾಭರಣಗಳ ಮಳಿಗೆ ಎಂದೇ ಖ್ಯಾತಿ ಪಡೆದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ 25,2೦೦ಕ್ಕೂ ಅಽಕ ಶೈಲಿಯ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರ ಮನ ಮೆಚ್ಚುವ ಆಭರಣಗಳ ಆಯ್ಕೆಗೆ ವಿಫುಲ ಅವಕಾಶವಿದೆ. ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಇಲ್ಲಿ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.
ಪುರಾತನ ಆಭರಣಗಳ ವಿಭಾಗ ಪ್ರಾಚಿಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ. ಅದೇ ರೀತಿ ಗ್ಲೋ ವಜ್ರಾಭರಣ ವಿಭಾಗದಲ್ಲಿ ಸುಮಾರು 2,೦೦೦ಕ್ಕೂ ಮಿಕ್ಕಿದ ಡಿಸೈನ್ಗಳಲ್ಲಿ ಪ್ರಜ್ವಲಿಸುವ ಅದ್ಭುತ ವಜ್ರಾಭರಣಗಳ ಸಂಗ್ರಹವಿದೆ.
‘ಪಾರ್ಥ’ ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಇನ್ನೂ ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ವಿಶೇಷ ರಿಯಾಯಿತಿ, ಕೊಡುಗೆಗಳು
ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ಪ್ರಕಟಿಸಲಾಗಿದೆ. ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಮ್ಗೆ ರೂ.2೦೦ರವರೆಗೆ ರಿಯಾಯಿತಿ ಹಾಗೂ ರೂ.25,೦೦೦ಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಮತ್ತು ಆಕರ್ಷಕ ಉಡುಗೊರೆಗಳನ್ನು ನೀಡುತ್ತಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.