ಅಕ್ಷಯ ತೃತೀಯಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಕರ್ಷಕ ಕೊಡುಗೆ – ಗ್ರಾಹಕರಿಂದ ಉತ್ತಮ ಸ್ಪಂದನೆ

0

ಪುತ್ತೂರು: ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆ ನೀಡಲಾಗುತ್ತಿದ್ದು, ಗ್ರಾಹಕರು ಬೆಳಿಗ್ಗೆಯಿಂದಲೇ ಚಿನ್ನಾಭರಣ ಖರೀದಿಯಲ್ಲಿ ಉತ್ಸುಕರಾಗಿದ್ದಾರೆ. ಗ್ರಾಹಕರು ಬೆಳಿಗ್ಗೆಯಿಂದಲೇ ತಮ್ಮಿಷ್ಟದ ಚಿನ್ನಾಭರಣ ಖರೀದಿಸುತ್ತಿದ್ದಾರೆ.
ಮಳಿಗೆಯಲ್ಲಿ ಚಿನ್ನಾಭರಣಗಳ ಖರೀದಿಯಲ್ಲಿ ಪ್ರತೀ 10 ಗ್ರಾಂಗೆ 2500ರೂ.ವರೆಗೆ ರಿಯಾಯಿತಿ ಹಾಗೂ ವಜ್ರಾಭರಣಗಳ ಖರೀದಿಯಲ್ಲಿ ಪ್ರತಿ ಕ್ಯಾರೆಟ್‌ಗೆ 7,೦೦೦ರೂ. ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತಿ ಕೆ.ಜಿ.ಗೆ 3,೦೦೦ರೂ. ರಿಯಾಯಿತಿ ನೀಡಲಾಗುತ್ತಿದೆ.


ಪುರಾತನ ಆಭರಣಗಳ ವಿಭಾಗ ಪ್ರಾಚಿ’ಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ. ಅದೇ ರೀತಿ ಗ್ಲೋ ವಜ್ರಾಭರಣ ವಿಭಾಗದಲ್ಲಿ ಸುಮಾರು 2,೦೦೦ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಭುತ ವಜ್ರಾಭರಣಗಳ ಸಂಗ್ರಹವಿದೆ.ಪಾರ್ಥ’ ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಈ ಬಾರಿ ಗ್ರಾಹಕರಿಗೆ ಕೈಗೆಟುವ ದರದಲ್ಲಿ ಗುಣಮಟ್ಟದಲ್ಲಿ ಕೊರತೆ ಆಗದಂತೆ ಅದೇ ವಿನ್ಯಾಸಗಳನ್ನು ಹೊಸ ತಂತ್ರಜ್ಞಾನದ ಮುಖಾಂತರ ಹೆಚ್ಚು ಕಾಲ ಬಾಳಿಕೆ ಬರುವಂತಹ ಲೈಟ್‌ವೈಟ್ ಆಭರಣಗಳು, ಕಲ್ಲಿನ ಆಭರಣಗಳಲ್ಲಿಯೂ ಲೈಟ್‌ವೈಟ್ ಕಲೆಕ್ಷನ್, ಪೇಪರ್ ಕಾಸ್ಟಿಂಗ್ ಆಭರಣಗಳು, ವೆರೈಟಿ ಆ- ಕಲ್ಲರ್ಸ್ ಆಭರಣಗಳು ಸೇರಿದಂತೆ ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.


ಈ ಕೊಡುಗೆಗಳು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here