ಬಡಗನ್ನೂರು ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬಡಗನ್ನೂರು ಶಾಲೆಗೆ ಸಹಾಯಧನ-ಚೆಕ್ ಹಸ್ತಾಂತರ

0

ಬಡಗನ್ನೂರು: ದ.ಕ.ಜಿ.ಪ.ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿನ  ಶಾಲಾ ಅಭಿಮಾನ ಸಭಾಂಗಣ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ವತಿಯಿಂದ 1ಲಕ್ಷ  ರೂ. ಅನುದಾನ ಮಂಜೂರುಗೊಂಡಿದ್ದು, ಪುತ್ತೂರು ಯೋಜನಾ ಕಚೇರಿ ಯೋಜನಾಧಿಕಾರಿ ಶಶಿಧರ್ ರೂ.1 ಲಕ್ಷದ ಚೆಕ್ ನ್ನು ಶಾಲಾ ಮುಖ್ಯಶಿಕ್ಷಕಿ ಹರಿನಾಕ್ಷಿ ಹಾಗೂ ಶಾಲಾಭಿವೖದ್ಧಿ ಸಮಿತಿ ಅಧ್ಯಕ್ಷ ಬಾಬು ಮೂಲ್ಯರವರಿಗೆ ಹಸ್ತಾಂತರ ಮಾಡಿದರು.
ಈ ಸಂಧರ್ಭದಲ್ಲಿ ವಲಯ ಮೇಲ್ವಿಚಾರಕರಾದ ಹರೀಶ್ ಕುಲಾಲ್ ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ ಸೇವಾಪ್ರತಿನಿಧಿ ಸಾವಿತ್ರಿ, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾರಾಯಣ ರೈ ಕುದ್ಕಾಡಿ, ಅಧ್ಯಕ್ಷ ಸುರೇಶ್ ರೈ ಪಳ್ಳತ್ತಾರು, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗಿರೀಶ್ ಗೌಡ, ಶ್ರೀಧರ್ ನಾಯ್ಕ, ಲತಾ ಕಟ್ಟಾವು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here