ಮೇ.5ರಂದು ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಾಜಗೋಪುರ ಮತ್ತು ಮಹಾದ್ವಾರ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯ ಭರದಿಂದ ಸಾಗುತ್ತಿದ್ದು ಮೇ.5ರಂದು ಬೆಳಿಗ್ಗೆ 11:00ರಿಂದ ರಾಜಗೋಪುರ ಮತ್ತು ರಥಭೀದಿಯಲ್ಲಿ ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ.ಮೂ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, ಶ್ರೀಧಾಮ‌‌ ಮಾಣಿಲದ ಮೋಹನದಾಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈನ ಅಡಳಿತ ನಿರ್ದೇಶಕರಾದ ಡಾ.ಸದಾಶಿವ ಶೆಟ್ಟಿ ಕುಳೂರು ಕನ್ಯಾನ,ಶ್ರೀ ರಾಜರಾಜೇಶ್ವರಿ ದೇವಸ್ಥಾನ ಮುಂಡಪಳ್ಳ ಇದರ ಅಡಳಿತ‌ ಮೊಕ್ತೇಸರರಾದ ಕೆ.ಕೆ ಶೆಟ್ಟಿ ಕುತ್ತಿಕಾರು,ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈ. ಲಿ ಬರೋಡಾದ ಅಡಳಿತ ನಿರ್ದೇಶಕರಾದ ಶಶಿಧರ ಶೆಟ್ಟಿ ನವಶಕ್ತಿಯವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಪಡ್ಡಿಲ್ಲಾಯ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆ, ವ್ಯವಸ್ಥಾಪನ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ವಿವಿಧ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು,ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

LEAVE A REPLY

Please enter your comment!
Please enter your name here