ಪುತ್ತೂರು: ಕೆದಿಲ ಗ್ರಾಮದ ಕೂಲಿ ಕಾರ್ಮಿಕರೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.7ರಂದು ನಡೆದಿರುವ ಕುರಿತು ವರದಿಯಾಗಿದೆ.
ಕೆದಿಲ ನಿವಾಸಿ ವಾಸು ಎಂಬವರ ಪುತ್ರ ಲೋಕೇಶ(31ವ)ರವರು ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೇ.6ರಂದು ಅವರು ಕೂಲಿ ಕೆಲಸಕ್ಕೆ ಹೋಗಿ ಮನೆಯಲ್ಲಿದ್ದರು. ಆದರೆ ಬೆಳಗ್ಗಿನ ಜಾವ ನೋಡುವಾಗ ಮನೆಯ ಹಾಲ್ನಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಂದೆ ವಾಸು ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.