ಆಪರೇಷನ್ ಸಿಂಧೂರ್ : ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರಾರ್ಥನೆ

0

ಕಡಬ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆಗೆ ಬೆಂಬಲವಾಗಿ ಹಾಗೂ ದೇಶಕ್ಕೆ ಒಲಿತಾಗಲಿ ಎಂದು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಹಾಗೂ ಕ್ಷೇತ್ರದ ನಾಗಬನದಲ್ಲಿ ತಂಬಿಲಾದಿ ಸೇವೆಗಳು, ಮಧ್ಯಾಹ್ನ ವಿಶೇಷ ಪೂಜೆ, ಪ್ರಾರ್ಥನೆ, ಸಂಕಲ್ಪ ನೆರವೇರಿಸಿ, ಭಕ್ತರಿಗೆ ಪ್ರಸಾದ, ಅನ್ನಸಂತರ್ಪಣೆ ವಿತರಿಸಲಾಯಿತು.

ಕ್ಷೇತ್ರದ ಸಮಿತಿಯವರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here