ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧ ಆಯ್ಕೆ

0

ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಈ ವಿಚಾರದಲ್ಲಿ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆ ಎದುರಾಯಿತು.

ಈ ಹಿನ್ನೆಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು, ಸಮಾಲೋಚನೆ ನಡೆಯಿತು.

ಸಭೆಗೆ ಇ.ಒ.ಬಂದ ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು. ಆದರೆ ಹರೀಶ್ ಇಂಜಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಲಿಲ್ಲವೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಸಭೆಯಿಂದ ಹೊರನಡೆದರು. ಬಳಿಕ ಚುನಾವಣಾ ಪ್ರಕ್ರಿಯೆ ನಡೆಯಿತು.‌ ಹರೀಶ್ ಇಂಜಾಡಿಯವರ ಹೆಸರನ್ನು ಸೌಮ್ಯ ಸೂಚಿಸಿ ಡಾ. ರಘು ಅನುಮೋದಿಸಿದರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here