ಪುತ್ತೂರು : ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಮೇ.13 ರಂದು ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಅಶ್ವಿನ್ ಎಲ್.ಶೆಟ್ಟಿಯವರು ವಹಿಸಿದ್ದರು.
ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈರವರು ಮಾತನಾಡಿ ವಾರ್ಷಿಕೋತ್ಸವವು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಒಟ್ಟು ಸೇರಿ ಆಚರಿಸುವಂತಹ ಕಾರ್ಯಕ್ರಮ. ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದರು.
ಮುಖ್ಯ ಅತಿಥಿ ಡೆಪ್ಯೂಟಿ ಸೂಪರಿಡೆಂಟ್ ಆಫ್ ಪೊಲೀಸ್ ವಿಜಯ ಪ್ರಸಾದ್ ರವರು ಮಾತನಾಡಿ ಜೀವನದ ಪ್ರತಿಯೊಂದು ಕಾರ್ಯವು ಕಾನೂನು ಬದ್ಧವಾದದ್ದು, ಇದನ್ನು ಅರಿತು ಬಾಳಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು. ಇನ್ನೋರ್ವ ಅತಿಥಿಗಳಾಗಿದ್ದ ದುರ್ಗಾಂಬ ಪದವಿಪೂರ್ವ ಕಾಲೇಜು ಅಲಂಕಾರಿನ ಪ್ರಾಂಶುಪಾಲರಾದ ರೂಪಾ ಜೆ.ರೈ ಶುಭಹಾರೈಸಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಶಶಿಕಲಾ ಎಸ್ ಆಳ್ವ, ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪುಷ್ಪಾವತಿ, ಸಂಸ್ಥೆಯ ಉಪಪ್ರಾಂಶುಪಾಲರಾದ ಶೇಷಗಿರಿ ಎಂ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ.ರಾಜಲಕ್ಷ್ಮೀ ಎಸ್.ರೈಯವರು ವಾರ್ಷಿಕ ವರದಿಯನ್ನು ವಾಚಿಸಿದರು. ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿ, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು. ಪ್ರಥಮ ಬಿಸಿ.ಎ ವಿದ್ಯಾರ್ಥಿ ಮಹಮ್ಮದ್ ಅನೀಸ್ ಹಾಗೂ ದ್ವಿತೀಯ ಬಿ.ಎ ವಿದ್ಯಾರ್ಥಿ ದೀಕ್ಷಿತ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಲೀಮತ್ ಸಝಾನ ಕಾರ್ಯಕ್ರಮದ ನಿರೂಪಣೆ ಮಾಡಿದರು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು
