ಪುತ್ತೂರು: ಯೋಗವು ಮನುಷ್ಯ ಹಾಗೂ ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ. ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವವು ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ. ಆನಂತರ ಈ ದೇಹ ಮನಸ್ಸುಗಳೆರಡೂ ಸ್ವಯಂಪ್ರಕಾಶನಾದ ಆತ್ಮನೊಡನೆ ವಿಹರಿಸಲು ಅನುವಾಗುತ್ತವೆ. ಧ್ಯಾನದ ಮೂಲಕ ಮನಸ್ಸನ್ನು ಸಕಾರಾತ್ಮಕವಾಗಿ ಅಣಿಗೊಳಿಸುತ್ತಾ ಗಟ್ಟಿಯಾದರೆ ಈ ರೋಗದ ವೈರಾಣು ದೇಹ ಸೇರಿದರೂ ಸೋತು ಹೋಗುವುದು ಖಂಡಿತ. ಸಕಾರಾತ್ಮಕ ಚಿಂತನೆಗಳಿಗೆ ಯೋಗ ಅನಿವಾರ್ಯ. ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ಶರಾವತಿ ರವಿನಾರಾಯಣ ರವರು ಹೇಳಿದರು.
ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಮೂರು ದಿನಗಳ ಯೋಗ ಶಿಬಿರದಲ್ಲಿ ಅವರು ಮಾತನಾಡಿದರು.
ಆಟಗಳ ಮೂಲಕ ಕಲಿಕೆ, ಚಟುವಟಿಕೆಗಳು, ಯೋಗಾಸನ,ಉಸಿರಾಟದ ಅಭ್ಯಾಸಗಳು,ಕಥೆಗಳು,ಮೌಲ್ಯಗಳ ಕಲಿಕೆ ಇನ್ನಿತರ ವಿಚಾರದ ತಿಳುವಳಿಕೆಯನ್ನು ನೀಡುವುದರ ಜೊತೆಗೆ ದೈಹಿಕ ಸದೃಢತೆ, ಏಕಾಗ್ರತೆ, ಸ್ಮರಣ ಶಕ್ತಿ, ಉತ್ತಮ ನಡೆನುಡಿ, ಸೌಹಾರ್ದತೆ ಮುಂತಾದ ಪ್ರಯೋಜನಗಳನ್ನು ಈ ಶಿಬಿರದಿಂದ ಪಡೆಯಬಹುದು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
Home ಇತ್ತೀಚಿನ ಸುದ್ದಿಗಳು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಯೋಗ...