ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿದ ಘಟನೆ ಕೋಡಿಂಬಾಡಿಯಲ್ಲಿ ಮೇ.18ರಂದು ನಡೆದಿದೆ.

ಚಾಲಕ ಅಪಾಯದಿಂದ ಪಾರಾಗಿದ್ದು ಕಾರಿಗೆ ಹಾನಿಯಾಗಿದೆ. ಘಟನೆ ವೇಳೆ ಅದೇ ಮಾರ್ಗವಾಗಿ ಕಾರಿನಲ್ಲಿ ಸಂಚರಿಸುತ್ತಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಕಾರನ್ನು ರಸ್ತೆ ಬದಿಗೆ ತರಲು ಸಹಕರಿಸಿದರು.