ಪುತ್ತೂರು: ಈ ವರ್ಷ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ದಾರುಲ್ ಹಸನಿಯಾ ಯು.ಎ.ಇ.ನ್ಯಾಷನಲ್ ಸಮಿತಿಯ ಕಾರ್ಯಧ್ಯಕ್ಷರಾದ ಅನೀಸ್ ಪುರುಷರಕಟ್ಟೆ ಅವರನ್ನು ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಯಲ್ಲಿ ಬೀಳ್ಕೊಡಲಾಯಿತು.
ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಶರಫುದ್ದೀನ್ ತಂಙಳ್ ಸಾಲ್ಮರ ಮತ್ತು ಪ್ರಧಾನ ಕಾರ್ಯದರ್ಶಿ ಹಸನ್ ಹಾಜಿ ಸಿಟಿ ಬಝಾರ್ ಅವರು ಅನೀಸ್ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಅನ್ವರ್ ಸ್ವಾದಿಕ್ ಮುಸ್ಲಿಯಾರ್ ಮತ್ತಿತರರು ಉಪಸ್ಥಿತರಿದ್ದರು.