ಪುತ್ತೂರು: ಪ್ರಸಿದ್ಧ ಯಕ್ಷಗಾನ ಸ್ತ್ರೀ ವೇಷಧಾರಿ ಕಡಬ ಶ್ರೀನಿವಾಸ ರೈರವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಕ್ಷಗಾನ ರಂಗದಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಇವರನ್ನು ಆಯ್ಕೆ ಮಾಡಲಾಗಿದ್ದು ಮೇ.22ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕಡಬ ಮರ್ಧಾಳ ನಿವಾಸಿಯಾದ ಇವರು ಸುಮಾರು 34 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾ ಸೇವೆ ಮಾಡುತ್ತಿದ್ದು ಕಳೆದ 10 ವರ್ಷಗಳಿಂದ ಬಪ್ಪನಾಡು ಮೇಳದಲ್ಲಿ ಪ್ರಧಾನ ಸ್ತ್ರೀವೇಷಧಾರಿಯಾಗಿದ್ದಾರೆ. ಇವರು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಸನ್ಮಾನಗಳನ್ನು ಪಡೆದುಕೊಂಡಿದ್ದಾರೆ.