ಆಲಂಕಾರು ಭಾರತೀ‌ ವಿದ್ಯಾ ಸಂಸ್ಥೆಯಲ್ಲಿ ಮೂರು ದಿವಸದ ಉಚಿತ ಶಿಬಿರ ಉದ್ಘಾಟನೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಹಾಗೂ ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಆಲಂಕಾರು ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ 3 ದಿನದ ಉಚಿತ ಶಿಬಿರವನ್ನು ಶ್ರೀ ಭಾರತಿ ವಿದ್ಯಾಸಂಸ್ಥೆ ಆಲಂಕಾರುನಲ್ಲಿ ಮೇ 26ರಂದು ಶರವೂರು‌ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ಉದ್ಘಾಟಿಸಿದರು.

ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಮಹೇಶ್ ಕೆ ಸವಣೂರುರವರು‌ ಅಧ್ಯಕ್ಷತೆ‌ ವಹಿಸಿದರು.

ಅಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಸುರೇಶ್ ಕುಮಾರ್ ಕೂಡೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ದ.ಕ. ಜಿಲ್ಲೆ -2 ನಿರ್ದೇಶಕ ಎ.ಬಾಬು ನಾಯ್ಕ, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ಈಶ್ವರ ಗೌಡ ಪಡ್ಯಡ್ಕ, ಅಲಂಕಾರು ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಇಂದುಶೇಖರ ಶೆಟ್ಟಿ, ಕಡಬ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಕರುಣಾಕರ ಗೋಗಟೆ, ಕಡಬ ತಾಲ್ಲೂಕು ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ, ಕಡಬ ಅಖಿಲ ಕರ್ನಾಟಕ ಜನಜಾಗೃತಿ ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ,ಜನ ಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯರವರುಗಳು‌ ಶುಭ ಹಾರೈಸಿದರು.

ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ತಂಡದವರು, ವಲಯ ಮೇಲ್ವಿಚಾರಕರು, ಶಾಲಾ ಶಿಕ್ಷಕಿಯರು ಹಾಗೂ ಶಿಬಿರಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.
ಕಡಬ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಅಲಂಕಾರು ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಇಂದುಶೇಖರ ಶೆಟ್ಟಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಿಬಿರಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನಡೆಸಲಾಯಿತು.

LEAVE A REPLY

Please enter your comment!
Please enter your name here