ಪುತ್ತೂರು: ಕುರಿಯ ಗ್ರಾಮದ ಕೈಂತಿಲ ಎಂಬಲ್ಲಿ ಮಹಿಳೆಯೊಬ್ಬರು ಮನೆಯ ಕೊಟ್ಟಿಗೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಕುರಿಯ ಗ್ರಾಮದ ಕೈಂತಿಲ ನಿವಾಸಿ ವಿಶ್ವನಾಥ್ ಎಂಬವರ ಪತ್ನಿ ಸೀತಾಲಕ್ಷ್ಮೀ(50ವ)ರವರು ಆತ್ಮಹತ್ಯೆ ಮಾಡಿಕೊಂಡವರು.
ಬೆಳಗ್ಗೆ ಮನೆ ಮಂದಿ ಎದ್ದು ನೋಡುವಾಗ ಸೀತಾಲಕ್ಷ್ಮೀ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರು ಪತಿ ವಿಶ್ವನಾಥ, ಪುತ್ರಿ, ಪುತ್ರ ಹಾಗು ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.