ಪುತ್ತೂರು: ಉಪ್ಪಿನಂಗಡಿಯ ಕುಮಾರಧಾರ ನದಿಯಲ್ಲಿರುವ ಹಳೆಯ ಸೇತುವೆಯನ್ನು ಬಂದ್ ಮಾಡುವಂತೆ ಶಾಸಕರು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.
ಸೇತುವೆ ಹಳೆಯದಾಗಿರುವ ಕಾರಣ ಅದರ ಮೇಲೆ ವಾಹನ ಸಂಚಾರವಾದರೆ ಅಪಾಯ ಉಂಟಾಗುವ ಸಂಭವ ಇದೆ. ಸೇತುವೆಯ ಕಬ್ಬಿಣಗಳನ್ನು ಕಳವು ಮಾಡಿದ್ದಾರೆ. ಇದರ ಮೇಲೆ ಯಾವುದೇ ವಾಹನಗಳು ಸಂಚರಿಸದಂತೆ ಸೂಚನೆ ನೀಡಿದ್ದಾರೆ. ಮಳೆಗಾಲದ ಮುನ್ನೆಚ್ಚರಿಕೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಉಪ್ಪಿನಂಗಡಿಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಾಕೃತಿಕ ವಿಕೋಪ ತಡೆ ನಿರ್ವಹಣಾ ಸಭೆಯಲ್ಲಿ ಈ ಆದೇಶ ಮಾಡಲಾಗಿದೆ.