ಮಾಣಿ, ಉಪ್ಪಿನಂಗಡಿ ಅಂಡರ್‌ ಪಾಸ್‌ – ಇಂದಿನಿಂದ ವಾಹನ ಸಂಚಾರಕ್ಕೆ ಮುಕ್ತ

0

ಮಾಣಿ: ಇಂದಿನಿಂದ (ಮೇ 29) ಮಾಣಿ ಬಳಿಯ ವೆಹಿಕಲ್‌ ಅಂಡರ್‌ ಪಾಸ್‌(ವಿಯುಪಿ) ಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್‌ ಅಂಡರ್‌ ಪಾಸ್‌ ದ್ವಿ ಪಥವು ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಜೂ.2ರಿಂದ ಕಲ್ಲಡ್ಕ ಪೇಟೆಯಲ್ಲಿರುವ ಮೇಲುರಸ್ತೆಯಲ್ಲಿ ಎಡಭಾಗವನ್ನು ವಾಹನಗಳ ಸಂಚಾರಕ್ಕೆ ತೆರವುಗೊಳಿಸಲಾಗುತ್ತದೆ. ಅಡ್ಡಹೊಳೆಯಿಂದ ಪೆರಿಯಶಾಂತಿವರೆಗಿನ 15.13 ಕಿ.ಮೀ.ಗಳ ಪೈಕಿ 14.4 ಕಿ.ಮೀ.ಗಳ ಚತುಷ್ಪಥದ ಕಾಮಗಾರಿ ಪೂರ್ಣಗೊಂಡಿದೆ. ಪೆರಿಯಶಾಂತಿಯಿಂದ ಬಂಟ್ವಾಳದವರೆಗಿನ 48.48 ಕಿ.ಮೀ.ಗಳ ಪೈಕಿ 41.52 ಕಿ.ಮೀ.ಗಳ ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈ ಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here