ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳದ ಈರಾಕೋಡಿ ಎಂಬಲ್ಲಿ ಮೇ 27 ರಂದು ನಡೆದ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೇ 29 ರಂದು(ಗುರುವಾರ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ ಪೂಜಾರಿ(21),ಬಂಟ್ವಾಳದ ಅಮ್ಮುಂಜೆ ಗ್ರಾಮದ ಪ್ರಥ್ವಿರಾಜ್ ಜೋಗಿ (21) ಮತ್ತು ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಬಂಧಿತರು.
ಮೂವರನ್ನು ಬಂಟ್ವಾಳದ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ವಶಕ್ಕೆ ಪಡೆದಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.