ನೆಲ್ಯಾಡಿ: ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಸಂಭ್ರಮಾಚರಣೆಯು ಮೇ.28ರಂದು ನಡೆಯಿತು.
ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪಲಕ ಹಾಗೂ ಪ್ರಶಸ್ತಿ ಪತ್ರದೊಂದಿಗೆ ಅಭಿನಂದಿಸಲಾಯಿತು.
ಕಾಲೇಜು ಅನುಷ್ಠಾನ ಸಮಿತಿಯ ಅಧ್ಯಕ್ಷೆ ಉಷಾ ಅಂಚನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉದಯ್ ,ಅನುಷ್ಠಾನ ಸಮಿತಿಯ ಖಜಾಂಜಿ ವಿಶ್ವನಾಥ್ ಶೆಟ್ಟಿ, ಅನುಷ್ಠಾನ ಸಮಿತಿಯ ಸದಸ್ಯರಾದ ಸತೀಶ್, ಪ್ರಶಾಂತ್ ಸಿ ಎಚ್, ಶಿಕ್ಷಕರ ರಕ್ಷಕ ಸಂಘದ ಸದಸ್ಯೆ ಸೇಸಮ್ಮ ಅತಿಥಿಗಳಾಗಿ ಭಾಗವಹಿಸಿದರು.
ಚಂದ್ರಕಲಾಬಿ ಸ್ವಾಗತಿಸಿದರು. ಡಾ.ಸೀತಾರಾಮ್ ಅವರು ಕಾಲೇಜು ಚಟುವಟಿಗಳ ವಾರ್ಷಿಕ ವರದಿಯನ್ನು ಮಂಡಿಸಿದರು. ಸಚಿನ್ ಎನ್ ಟಿ ವಂದಿಸಿದರು. ಶ್ರುತಿ ಮತ್ತು ಪಾವನ ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಅನುಷ್ಠಾನ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.