ಆಲಂಕಾರು: ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ವತಿಯಿಂದ ಅಂದಾಜು 1.75 ಲಕ್ಷ ವೆಚ್ಚದಲ್ಲಿ ಆಲಂಕಾರು ಶ್ರೀ ದುರ್ಗಾಂಬಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಪುಸ್ತಕ ಮತ್ತು ಕಂಪಾಸ್ ಪೆಟ್ಟಿಗೆ ನೀಡಿದ್ದು ಇದನ್ನು ಆಲಂಕಾರು ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಮತ್ತು ಆಡಳಿತ ಮಂಡಳಿ ಸದಸ್ಯರಾದ ತಾರನಾಥ ರೈ ನಗ್ರಿ ಯವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೂಪಾ ಜೆ ರೈ ಮುಖ್ಯ ಗುರುಗಳಾದ ನವೀನ್ ರೈ, ಎಲ್ಲಾ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.