ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ – 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ನೆಹರು ನಗರದಲ್ಲಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ 2024-25ರ ಸಾಲಿನ 10ನೇ ತರಗತಿಯ ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಶೇ.100 ಫಲಿತಾಂಶದ ಹಿನ್ನೆಲೆಯಲ್ಲಿ ಮೇ.29ರಂದು, ತರಗತಿಯ ಎಲ್ಲಾ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ದೇಶ ಭಕ್ತಿ, ಸ್ವಾಭಿಮಾನ ಮುಂತಾದ ಉತ್ತಮ ಗುಣಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಮುನ್ನಡೆಯುತ್ತಾ ಬಾಳಿನಲ್ಲಿ ಉನ್ನತಿ ಗಳಿಸಬೇಕು ಎಂದು ಶುಭಹಾರೈಸಿದರು.

ಶಾಲಾ ಅಧ್ಯಕ್ಷರಾದ ವಸಂತಿ ಕೆ. ಇವರು ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಹಾಗೂ ಸಂಯಮವನ್ನು ಅಳವಡಿಸಿಕೊಂಡು ಉತ್ತಮ ಜೀವನವನ್ನು ನಡೆಸಬೇಕೆಂದು ಹಿತನುಡಿಗಳನ್ನಾಡಿದರು.
ಶಾಲಾ ಸಂಚಾಲಕ ಭರತ್ ಪೈ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶಂಕರಿಶರ್ಮ, ಶಾಲಾ ಶೈಕ್ಷಣಿಕ ಸಲಹೆಗಾರರಾದ ಅನುರಾಧಶಿವರಾಮ್, ಶಾಲಾ ಪ್ರಾಂಶುಪಾಲರಾದ ಸಿಂಧು ವಿ.ಜಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಅನೀಶ್ ಪ್ರಭು ಖಂಡಿಗೆ ಇವರನ್ನು ಸನ್ಮಾನಿಸಲಾಯಿತು. ಎಲ್ಲಾ ಸಾಧಕರನ್ನು ಹಾಗೂ ಕೆಲವು ವಿದ್ಯಾರ್ಥಿಗಳು 100 ಅಂಕ ಪಡೆದ ವಿಷಯಗಳಾದ ಸಂಸ್ಕೃತ ಮತ್ತು ಸಮಾಜ ವಿಜ್ಞಾನದ ಬೋಧಕರಾದ ಜಯಶ್ರೀ ಭಟ್ ಮತ್ತು ಲತಾಶಂಕರಿ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು, ಪೋಷಕರು, ಹಾಗೂ ಶಿಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಶಾಲಾ ಪ್ರಾಥಮಿಕ ವಿಭಾಗದ ಸಂಯೋಜಕಿ ಶ್ರೀದೇವಿ ಕೆ.ಹೆಗ್ಡೆ ಸ್ವಾಗತಿಸಿ, ಶಿಕ್ಷಕಿಯರಾದ ಕು.ರಶ್ಮಿತಾ ಹಾಗೂ ಲತಾಶಂಕರಿ ನಿರೂಪಿಸಿ, ಮಲ್ಲಿಕ ಕೆ. ವಂದಿಸಿದರು

LEAVE A REPLY

Please enter your comment!
Please enter your name here