ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ ಕಡಬ ಹಾಗೂ ಶ್ರೀ ಭಾರತಿ ವಿದ್ಯಾಸಂಸ್ಥೆ ಆಲಂಕಾರು ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ನಡೆದ ಮೂರು ದಿವಸದ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಮೇ.28 ರಂದು ನಡೆಯಿತು.
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕದ ವಿನ್ಸ್ಂಟ್ ಪಾಯಸ್ ರವರು ಅವರು, ಮಕ್ಕಳಲ್ಲಿ ಶಿಕ್ಷಣಕ್ಕೆ ಮಾತ್ರ ಒತ್ತು ನೀಡದೆ ಅವರಲ್ಲಿ ಮಾನವೀಯ ಗುಣಗಳನ್ನು ಬೆಳೆಸಿಕೊಂಡಾಗ ಸಮಾಜದಲ್ಲಿ ನಡೆಯುವ ಕೆಟ್ಟ ಘಟನೆಗಳು ದೂರವಾಗುವ ಸಾಧ್ಯವಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಡಬದ ಅಧ್ಯಕ್ಷ,ವಕೀಲ ಮಹೇಶ್ ಕೆ ಸವಣೂರು ವಹಿಸಿದರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ. ದ.ಕ ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಶ್ರೀ ಭಾರತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಗಂಗಾಧರ ಗೌಡ ಕುಂಡಡ್ಕ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ್ ರೈ ಜಿ, ಆಲಂಕಾರು ಅಖಿಲ ಕರ್ನಾಟಕ ಜನಜಾಗೃತಿ ವಲಯಾಧ್ಯಕ್ಷ ಇಂದು ಶೇಖರ ಶೆಟ್ಟಿ, ಬಿಳಿನೆಲೆ ವಲಯಾಧ್ಯಕ್ಷ ತಮ್ಮಯ್ಯ ಗೌಡ, ಗೋಳಿತೊಟ್ಟು ವಲಯಾಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಗಣೇಶ್ ಕೈಕುರೆ, ಶಿವಪ್ರಸಾದ್ ರೈ ಮೈಲೇರಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಶಾಂತ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಭವಾನಿ ಶಂಕರ್ ಮೊದಲಾದವರು ಶುಭಹಾರೈಸಿದರು.
ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಲಂಕಾರು ವಲಯಾಧ್ಯಕ್ಷ ಇಂದು ಶೇಖರ ಶೆಟ್ಟಿ ಮತ್ತು ವಿಪತ್ತು ನಿರ್ವಹಣಾ ಆಲಂಕಾರು ಘಟಕದ ಕೇಶವರನ್ನು ಸನ್ಮಾನಿಸಲಾಯಿತು. ಶಿಬಿರಾರ್ಥಿಗಳ ಪರವಾಗಿ ಪೃಥ್ವಿಸಾಗರ್ ಎಂ.ಕೆ, ದೀಕ್ಷಾ ಎಂ ಎನ್ ಅನಿಸಿಕೆ ವ್ಯಕ್ತ ಪಡಿಸಿದರು. ಇದೇ ಸಂದರ್ಭದಲ್ಲಿ ಪೋಷಕರ ಪಾದಪೂಜೆಯ ಮಹತ್ವವನ್ನು ಗಿರಿಶಂಕರ ಸುಲಾಯ ಮತ್ತು ಆಶಾ ನಡೆಸಿಕೊಟ್ಟರು.
ಆಲಂಕಾರು ವಲಯದ ಜನಜಾಗೃತಿ ಸದಸ್ಯರಾದ ಮಮತ, ಮೀನಾಕ್ಷಿ, ಬಾಬು ಕೆ ಎಸ್, ವಾರಿಜ, ಮೋಹಿನಿ, ವಲಯ ಮೇಲ್ವಿಚಾರಕರಾದ ಜಯಶ್ರೀ, ವಿಜಯೇಶ್ ಜೈನ್, ಆನಂದ, ವೀಣಾ, ಸೇವಾ ಪ್ರತಿನಿಧಿಗಳಾದ ಸವಿತಾ, ಪ್ರೇಮ, ಒಕ್ಕೂಟ ಪದಾಧಿಕಾರಿಗಳಾದ ಲಕ್ಷ್ಮೀಶ ಶೆಟ್ಟಿ, ಶಾರದಾ, ವಿಪತ್ತು ನಿರ್ವಹಣಾ ಘಟಕದ ಕೇಶವ ಗೌಡ, ಶೀನಪ್ಪ ಗೌಡ, ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಆಲಂಕಾರು ವಲಯ ಮೇಲ್ವಿಚಾರಕರಾದ ಸುಜಾತ ವಂದಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕರಾದ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರೂಪಿಸಿದರು.