ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ಪ್ರಾರಂಭೋತ್ಸವ- ಅಭಿನಂದನೆ

0


ಪರಿಶ್ರಮ-ಶಿಸ್ತು ಜೀವನದಲ್ಲಿ ಅಳವಡಿಸಿ- ಎಂ.ಬಿ.ಸದಾಶಿವ
ನಮ್ಮ ಶಾಲೆಯ ಧ್ಯೇಯ- ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಮೇ.30 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರಭವನದಲ್ಲಿ ಜರಗಿತು. 8ನೇ ತರಗತಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪುಸ್ತಕ ಉಡುಗೊರೆ ನೀಡಿ, ಸ್ವಾಗತಿಸಲಾಯಿತು. 10 ನೇ ತರಗತಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಪರಿಶ್ರಮ-ಶಿಸ್ತು ಜೀವನದಲ್ಲಿ ಅಳವಡಿಸಿ- ಎಂ.ಬಿ.ಸದಾಶಿವ
ವಿಶೇಷ ಉಪನ್ಯಾಸಗೈದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ.ಬಿ.ಸದಾಶಿವರವರು ಶ್ರೀ ರಾಮಕೃಷ್ಣ ಪ್ರೌಡಶಾಲೆಯು ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ.ಇಲ್ಲಿನ 88 ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಿರುವುದು ಅತ್ಯಂತ ಖುಷಿಯ ವಿಚಾರವಾಗಿದೆ. ಕಾವು ಹೇಮನಾಥ ಶೆಟ್ಟಿರವರ ಸಂಚಾಲಕತ್ವದಲ್ಲಿ ಶಾಲೆಯು ಅತ್ಯುತ್ತಮ ರೀತಿಯಲ್ಲಿ ಶೈಕ್ಷಣಿಕ ಸಾಧನೆಯನ್ನು ಮಾಡುತ್ತಿರುವುದು ಪ್ರಶಂಶನೀಯ ಎಂದು ಹೇಳಿ, ವಿದ್ಯಾರ್ಥಿಗಳು ಪರಿಶ್ರಮ-ಶಿಸ್ತು ಜೀವನದಲ್ಲಿ ಅಳವಡಿಸಿದಲ್ಲಿ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು.
.
ನಮ್ಮ ಶಾಲೆಯ ಧ್ಯೇಯ- ಕಾವು ಹೇಮನಾಥ ಶೆಟ್ಟಿ
ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರು ಮಾತನಾಡಿ ರಾಮಕೃಷ್ಣ ಶಾಲೆಯಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದ್ದೇವೆ. ನಮ್ಮ ಶಾಲೆಯಲ್ಲಿ ಅಂಕ ನೋಡಿ, ವಿದ್ಯಾರ್ಥಿಯನ್ನು ಸೇರ್ಪಡೆ ಮಾಡುವುದಿಲ್ಲ. ಬದಲಾಗಿ ಎಷ್ಟೇ ಕಡಿಮೆ ಅಂಕ ಇದ್ದರೂ, ಆ ವಿದ್ಯಾರ್ಥಿಯನ್ನು ದಾಖಲಾತಿ ಮಾಡಿ, ಅವರಿಗೆ ಶಾಲೆಯಲ್ಲಿ ಉತ್ತಮವಾದ ಶಿಕ್ಷಣ ಕಲಿಸಿ, ಪರಿಪೂರ್ಣ ವಿದ್ಯಾರ್ಥಿಯಾಗಿ ರೂಪಿಸಿ, ಎಸ್‌ಎಸ್‌ಎಲ್‌ಸಿಯಲ್ಲಿ ಉನ್ನತವಾದ ಸಾಧನೆಯನ್ನು ಮಾಡುವುದೇ ನಮ್ಮ ಶಾಲೆಯ ಧ್ಯೇಯ ಎಂದು ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ಮತ್ತು ಅಲಂಕಾರು ದುರ್ಗಾಂಬ ಪ್ರೌಢಶಾಲಾ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತುರವರುಗಳು ಸಂದಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಶಾಲಾ ಆಡಳಿತ ಸಮಿತಿ ಸದಸ್ಯರುಗಳಾದ ಜಯಪ್ರಕಾಶ್ ರೈ ನೂಜಿಬೈಲು, ನಿತ್ಯಾನಂದ ಶೆಟ್ಟಿ ಮನವಳಿಕೆ, ವಾಣಿ ಶೆಟ್ಟಿ ನೆಲ್ಯಾಡಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಶಿಕ್ಷಕಿ ಗಾಯತ್ರಿ ಕಾರ್‍ಯಕ್ರಮ ನಿರೂಪಿಸಿದರು.


ಕಲಿಕಾ ಶುಲ್ಕ ಅತ್ಯಂತ ಕನಿಷ್ಟ
ಪುತ್ತೂರು ಶ್ರೀ ರಾಮಕೃಷ್ಭ ಫ್ರೌಢ ಶಾಲೆಯಲ್ಲಿ ಕಲಿಕಾ ಶುಲ್ಕ ಅತ್ಯಂತ ಕನಿಷ್ಟವಾಗಿದ್ದು, ಇದು ನಿಜಕ್ಕೂ ಅತ್ಯಂತ ಗಮನಾರ್ಹ ವಿಷಯವಾಗಿದ್ದು, ಇದು ಜಿಲ್ಲೆಗೆ ಮಾದರಿಯಾಗಿದೆ
ಎಂ.ಬಿ.ಸದಾಶಿವ, ಜಿಲ್ಲಾ ಮಾಜಿ ಗವರ್ನರ್

LEAVE A REPLY

Please enter your comment!
Please enter your name here