ಕೆಯ್ಯೂರು: ಸಿಡಿಲು ಬಡಿದು ಮನೆಗೆ ಹಾನಿ – ಗ್ರಾ.ಪಂ.ನಿಂದ ತುರ್ತು ಪರಿಹಾರಧನ ವಿತರಣೆ

0

ಪುತ್ತೂರು: ಕೆಯ್ಯೂರು ಗ್ರಾಮದ ದೇರ್ಲ ಎಂಬಲ್ಲಿ ಪರಿಶಿಷ್ಟ ಜಾತಿಯ ಅಪ್ಪಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾಗಿದ್ದು, ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಪಂನಿಂದ ತುರ್ತು ಪರಿಹಾರಧನವಾಗಿ ರೂ.5 ಸಾವಿರವನ್ನು ಗ್ರಾ.ಪಂನಿಂದ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆಯವರು ಮೇ.31ರಂದು ಅಪ್ಪಿಯವರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಸದಸ್ಯ ಬಟ್ಯಪ್ಪ ರೈ ದೇರ್ಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here