ಕಡಬ: ದ.ಕ. ಜಿಲ್ಲೆಗೆ ನೂತನ ಎಸ್.ಪಿ. ಯಾಗಿ ಡಾ. ಅರುಣ್ ಕೆ. ಅವರು ಅಧಿಕಾರ ವಹಿಸಿದ ಬಳಿಕ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ಇದೀಗ ಪೊಲೀಸರು ಅಲರ್ಟ್ ಆಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮಾಹಿತಿ ಸಂಗ್ರಹಿಸಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಿದ್ದಾರೆ.
ಈ ಮಧ್ಯೆ ಮೇ.30ರಂದು ರಾತ್ರಿ ವೇಳೆ ಕಡಬ ಎಸ್.ಐ. ಹಾಗೂ ಸಿಬ್ಬಂದಿಗಳು ವಿವಿಧ ಸಂಘಟನೆಯಲ್ಲಿ ಗುರುತಿಸಿಕೊಂಡಿರುವವರ ಮನೆಗೆ ತೆರಳಿ ಜಿ.ಪಿ.ಎಸ್. ಫೋಟೋ ಹಾಗೂ ಅವರನ್ನು ವಿಚಾರಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಎಸ್.ಐ. ಅಭಿನಂದನ್ ಅವರು, ನಾವು ಎಲ್ಲಾ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ.