ಪುತ್ತೂರು:ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಪುತ್ತೂರು ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಆರ್ಯಾಪು ಹಾಗೂ ಸರೋವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಆರ್ಯಾಪು ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಆರ್ಯಾಪು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಡ್ರಿಚ್ ಅಜಯ್ ಡಿಸೋಜಾ ಮಾತನಾಡಿ, ಮಹಿಳೆಯರು ತರಬೇತಿ ಪಡೆದು ಸ್ವ ಉದ್ಯೋಗ ಮಾಡುವಲ್ಲಿ ಗಮನ ಹರಿಸಿ, ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವಿ ಮಹಿಳಾ ಉದ್ಯಮಿದಾರರಾಗಿ ಎಂದರು.
ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಪಂಚಾಯತ್ ಮಾತನಾಡಿ, ಮಹಿಳೆಯರು ತಮ್ಮ ಮಾರುಕಟ್ಟೆ ಕೌಶಲ್ಯ ಹೆಚ್ಚಿಸಲು ಹೆಚ್ಚಿನ ಗಮನ ಹರಿಸಲು ತಿಳಿಸಿದರು. ವೇದಿಕೆಯಲ್ಲಿ ಪುತ್ತೂರು ಶಾಖೆ ಬ್ಯಾಂಕ್ ಆಫ್ ಬರೋಡ ಶಾಖಾ ವ್ಯವಸ್ಥಾಪಕ ಸಾಧಿಕ್, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾದೇಶಿಕ ಕಚೇರಿಯ ಮಮತಾ,ಪಂಚಾಯತ್ ಕಾರ್ಯದರ್ಶಿ ಮೋನಪ್ಪ , ತಾಲೂಕು ಅಭಿಯಾನ ನಿರ್ವಹಣೆ ಘಟಕ,ಆರ್ಯಾಪು ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ನಳಿನಿ ಉಪಸ್ಥಿತರಿದ್ದರು. ವನಜ ನಿರೂಪಿಸಿದರು, ಅರುಣ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.