ಪುತ್ತೂರು: ವೀರಮಂಗಲ ಸಮೀಪದ ಕೆದ್ಕಾರ್ ಪರಂದೋಡಿ ಎಂಬಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ರಸ್ತೆ ಬದಿಯ ಅನತಿ ದೂರದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ತೀರಾ ಕೆಳಮಟ್ಟದಲ್ಲಿದ್ದು ಯಾವುದೇ ಸಂದರ್ಭದಲ್ಲಿ ಅಪಾಯ ಸಂಭವಿಸುವ ಸಾಧ್ಯತೆಯಿದೆ, ಹಾಗಾಗಿ ಮೆಸ್ಕಾಂ ಇಲಾಖೆ ಕೂಡಲೇ ಗಮನ ಹರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.