ಪುತ್ತೂರು: ತುಳು ಎಂಬುದು ಭಾಷೆ ಮಾತ್ರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಹೇಳಿದರು.
ಅವರು ಮೇ.30ರಂದು ಸಿರಿಗಂಗೆ ಪ್ರಕಾಶ ತುಳುನಾಡು ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಸಹಕಾರದಲ್ಲಿ ಶ್ರೀಶಾವಾಸವಿ (ವಿದ್ಯಾಶ್ರೀ) ಅವರು ಬರೆದ ‘ಗೇನೊದ ಬುಲೆ” ತುಳು ಬರವುದ ಮುಡಿ ಕೃತಿ ಬಿಡುಗಡೆ ಮಾಡಿ ಮಾತನಾಡಿದರು.
ನಿವೃತ್ತ ಶಿಕ್ಷಕಿ ಶಂಕರಿ ಪಟ್ಟೆ ಹರನೂರ ದಾರಿ ಕವನದ ವೀಡಿಯೋ ಬಿಡುಗಡೆಗೊಳಿಸಿದರು. ಸಾಮಾಜಿಕ ಕಾರ್ಯಕರ್ತ ಹಾಗೂ ಪಂಚಾಯತ್ರಾಜ್ ತಜ್ಞ ವಿಲ್ಫ್ರೆಡ್ ಡಿಸೋಜ ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿದ್ದೀಕ್ ನಿರಾಜೆ ಅಧ್ಯಕ್ಷತೆ ವಹಿಸಿದ್ದರು.
ಪೂವರಿ ಪತ್ರಿಕೆಯ ಸಂಪಾದಕ ವಿಜಯ ಕುಮಾರ್ ಹೆಬ್ಬಾರಬೈಲು ಕೃತಿ ಪರಿಚಯ ಮಾಡಿದರು. ವಕೀಲೆ ಹರಿಣಾಕ್ಷಿ ಜೆ ಶೆಟ್ಟಿ ಕೃತಿಕಾರರ ಪರಿಚಯ ಮಾಡಿದರು. ಕೃತಿಕಾರೆ ಶ್ರೀಶಾವಾಸವಿ(ಶ್ರೀವಿದ್ಯಾ) ಅನುಭವ ಹಂಚಿಕೆ ಮಾಡಿಕೊಂಡರು. ಪತ್ರಕರ್ತ ಸುಧಾಕರ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
