ಕಳೆದ 8 ದಿನಗಳಿಂದ ಕುಡಿಯುವ ನೀರಿಗೆ ಸಮಸ್ಯೆ – ಶಾಸಕರಿಗೆ ದೂರು
ಪುತ್ತೂರು: ಕುಡಿಯುವ ನೀರು ಸರಬರಾಜು ಇಲ್ಲದೆ ಪುತ್ತೂರು ನಗರಸಭೆ ವ್ಯಾಪ್ತಿಯ ಸಂಪ್ಯ ಶ್ರೀನಿವಾಸ ಲೇ ಔಟ್ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಳೆದ 8 ದಿನಗಳಿಂದ ಈ ಭಾಗಕ್ಕೆ ಕುಡಿಯುವ ನೀರು ಸರಬರಾಜು ಇಲ್ಲದೆ ಇರುವುದರಿಂದ ಲೇ ಔಟ್ ನಿವಾಸಿಗಳು ಟ್ಯಾಂಕರ್ ನೀರಿಗೆ ಮೊರೆ ಹೋಗಿದ್ದಾರೆ.
ಶ್ರೀನಿವಾಸ ಲೇ ಔಟ್ ನಲ್ಲಿ ಸುಮಾರು 15 ಮನೆಗಳಿವೆ. ಹೆಚ್ಚಿನ ಎಲ್ಲಾ ಮನೆಯವರು ಕೂಡ ನಳ್ಳಿ ನೀರನ್ನೇ ಅವಲಂಬಿಸಿದ್ದಾರೆ. ಇದೀಗ ಎಂಟು ದಿನಗಳಿಂದ ನಳ್ಳಿ ನೀರು ಬರದೇ ಇರುವುದರಿಂದ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಿರಂತರವಾಗಿ ಈ ಲೇ ಔಟ್ ಗೆ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ವಾರ್ಡ್ ಸದಸ್ಯರ ಗಮನಕ್ಕೆ ತಂದಿದ್ದಾರೆ.
ಶಾಸಕರಿಗೆ ದೂರು
ಶ್ರೀನಿವಾಸ ಲೇ ಔಟ್ ಗೆ ಕುಡಿಯುವ ನೀರಿನ ಪೂರೈಕೆ ಇಲ್ಲದೆ ಸಮಸ್ಯೆ ಉಂಟಾಗಿರುವ ಬಗ್ಗೆ ಶಾಸಕರಾದ ಅಶೋಕ್ ಕುಮಾರ್ ರೈಯವರ ಗಮನಕ್ಕೆ ತರಲಾಗಿದ್ದು ಕೂಡಲೇ ವ್ಯವಸ್ಥೆ ಮಾಡಿ ಕೊಡುವ ಬಗ್ಗೆ ತಿಳಿಸಿದ್ದಾರೆ ಎಂದು ಮೋಹನ್ ಗೌಡ ಹಾಗೂ ಲೇ ಔಟ್ ನಿವಾಸಿಗಳು ತಿಳಿಸಿದ್ದಾರೆ.
ಪ್ರತಿ ಬಾರಿಯೂ ನೀರಿನ ಸಮಸ್ಯೆ
ಶ್ರೀನಿವಾಸ ಲೇ ಔಟ್ ಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವುದು ಇದೇ ಮೊದಲಲ್ಲ ಪ್ರತಿ ಬಾರಿಯೂ ಲೇ ಔಟ್ ಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಮೋಹನ್ ಗೌಡ ಹಾಗೂ ಲೇ ಔಟ್ ನಿವಾಸಿಗಳು ತಿಳಿಸಿದ್ದಾರೆ.