ಕಾಣಿಯೂರು: ಸ.ಉ.ಹಿ. ಪ್ರಾ ಶಾಲೆ ಕುದ್ಮಾರು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಜೂ.2ರಂದು ಆಚರಿಸಲಾಯಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಆರತಿ ಬೆಳಗುವ ಮೂಲಕ ಶಾಲಾ ಆವರಣದೊಳಕ್ಕೆ ಕರೆದುಕೊಂಡು ಬರಲಾಯಿತು. ಎಸ್ ಡಿ ಎಂ ಸಿ ಸದಸ್ಯರಾದ ಯೋಗೀಶ್ ಬರೆಪ್ಪಾಡಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಣೆ ಮಾಡಿದರು.
ಬಳಿಕ ನಡೆದ ಪೋಷಕರ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. 2025-26ನೇ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ಪ್ರಭಾರ ಮುಖಗುರುಗಳಾದ ಶ್ರೀಲತಾ ಇವರು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಇಲ್ಲಿನ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ನಿವೃತ್ತ ಶಾಲಾ ಮುಖ್ಯಗುರು ಕುಶಾಲಪ್ಪ ಬಿ , ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಕುವೆತ್ತೋಡಿ, ಎಸ್ ಡಿ ಎಂ ಸಿ ಅಧ್ಯಕ್ಷ ದೇವರಾಜ್ ನೂಜಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಜಾತ ಎ, ಸ್ವಾಗತಿಸಿ, ಶಿಕ್ಷಕಿ ಸುಜಾತ ಬಿ ವಂದಿಸಿದರು. ಶಿಕ್ಷಕಿ ವೀಣಾ ಕೆ ನಿರೂಪಿಸಿದರು.
ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಬಿಸಿಊಟ ಸಿಹಿಯೊಂದಿಗೆ ನೀಡಲಾಯಿತು. ಎಸ್ ಡಿ ಎಂ ಸಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಪೋಷಕರು ಭಾಗವಹಿಸಿದ್ದರು.