ಗಮಕ ಕಲಾ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಾಮಾನ್ಯ ಸಭೆ

0

ಪುತ್ತೂರು: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ದ.ಕ.ಜಿಲ್ಲೆ, ಪುತ್ತೂರು ತಾಲೂಕು ಘಟಕದ ಪದಾಧಿಕಾರಿಗಳ ಸಾಮಾನ್ಯ ಸಭೆಯು ಪುತ್ತೂರಿನ ತೆಂಕಿಲದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಮಧೂರು ಮೋಹನ ಕಲ್ಲೂರಾಯರ ಅಧ್ಯಕ್ಷತೆಯಲ್ಲಿ ನಡೆಯಿತು.

ಸೆಪ್ಟೆಂಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಿರುವ ಜಿಲ್ಲಾ ಮಟ್ಟದ 10ನೇ ಗಮಕ ಸಮ್ಮೇಳನದಲ್ಲಿ ಆಯೋಜನೆಗೊಳ್ಳಲಿರುವ ಕಾರ್ಯಕ್ರಮಗಳು ಹಾಗೂ ಪುತ್ತೂರಿನ ಶಾಲಾ ವಿದ್ಯಾರ್ಥಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳುವ ವಿಷಯಗಳ ಕುರಿತು ಸಮಾಲೋಚನೆಗಳು ನಡೆದವು. ಕಾರ್ಯಸೂಚಿಯಂತೆ ಸಮ್ಮೇಳನವನ್ನು ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು.

ಪುತ್ತೂರು ತಾಲೂಕು ಘಟಕದ ಗೌರವಾಧ್ಯಕ್ಷರಾದ ಭಾಸ್ಕರ ಬಾರ್ಯ, ಉಪಾಧ್ಯಕ್ಷರಾದ ವತ್ಸಲಾ ರಾಜ್ಞಿ, ಡಾll ಶೋಭಿತಾ ಸತೀಶ್, ಜಯಂತಿ ಹೆಬ್ಬಾರ್, ಕೋಶಾಧಿಕಾರಿಗಳಾದ ವೀಣಾ ಸರಸ್ವತಿ, ಸದಸ್ಯರಾದ ಪದ್ಮಾ ಕೆ. ಆರ್ ಆಚಾರ್ಯ, ವೀಣಾ ನಾಗೇಶ ತಂತ್ರಿ, ಹರಿಣಾಕ್ಷಿ ಜೆ. ಶೆಟ್ಟಿ, ಚಂದ್ರಶೇಖರ ಆಳ್ವ ಪಡುಮಲೆ ಸಭೆಯಲ್ಲಿ ಉಪಸ್ಥಿತರಿದ್ದರು.

ಓಂಕಾರ ಹಾಗೂ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯಲ್ಲಿ, ಘಟಕದ ಅಧ್ಯಕ್ಷರಾದ ವೇದವ್ಯಾಸ ರವರು ಸ್ವಾಗತಿಸಿ, ಕಾರ್ಯದರ್ಶಿ ಶಂಕರಿ ಶರ್ಮ ವಂದಿಸಿದರು.

LEAVE A REPLY

Please enter your comment!
Please enter your name here