ಪುತ್ತೂರು: ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಇತ್ತೀಚಿನ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿ ಕೇಸ್ ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಭಾಷಣ ನೆಪದಲ್ಲಿ ಸಂಘ ಪರಿವಾರದ ಹಿರಿಯರಿಗೆ, ಎನ್ ಐ ಎ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಮುಖಂಡರಿಗೆ ಕೇಸ್ ದಾಖಲಿಸಲಾಗಿದೆ. ಮಧ್ಯರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆಗೆ ನುಗ್ಗಿ ಜಿಪಿಎಸ್ ಪೋಟೋ ತೆಗೆಯುವ ಮೂಲಕ ಮಲಗಿರುವ ಮನೆ ಮಂದಿಗೂ ತೊಂದರೆ ನೀಡುವ ಪ್ರಕ್ರಿಯೆ ಸರ್ಕಾರ ನಡೆಸುತ್ತಿದೆ. ಸಂಘಪರಿವಾರದ ನಾಯಕರನ್ನು ಭಯೋತ್ಪಾದಕರ ರೀತಿ ಬಿಂಬಿಸುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಹಿಂದೂ ಕಾರ್ಯಕರ್ತರನ್ನು ಮಾತ್ರ ಟಾರ್ಗೆಟ್ ಮಾಡುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದವರು ಹೇಳಿದ್ದಾರೆ.