ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಪಡೆಯಲು ಸಾಧ್ಯ.ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನುಅರಿತು ಅದರ ಸದುಪಯೋಗವನ್ನು ಪಡೆಯಬೇಕು.ಈ ಮೂಲಕ ಆ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಶುಭಹಾರೈಸಿದರು.
ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.ಪ್ರಾರಂಭೋತ್ಸವದ ಅಂಗವಾಗಿ ಸರಸ್ವತಿ ಪೂಜೆಯು ಜೂ.2 ರಂದು ಕಶೆಕೋಡಿ ಸೂರ್ಯನಾರಾಯಣ ಭಟ್, ಹರಿಪ್ರಸಾದ್ ಇವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಂಪತ್ಕುಮಾರ್ , ಸದಸ್ಯರಾದ ಉಮೇಶ್ ನಾಯಕ್, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್,ಉಪನ್ಯಾಸಕರು, ಪೋಷಕರು,ಸಿಬ್ಬಂದಿ ವರ್ಗ ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.