ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ ವೈದೇಹಿ ಸಭಾಂಗಣದಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮ ನಡೆಯಿತು.
ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಅರುಣ್ ಹಾಗೂ ಪ್ರದೀಪ್ ಇವರು ಸರಸ್ವತಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ನಿರ್ದೇಶಕರಾದ ವತ್ಸಲಾ ರಾಜ್ಞಿ , ಡಾ. ಕೃಷ್ಣಪ್ರಸನ್ನ .ಕೆ, ಕೋಶಾಧಿಕಾರಿಗಳಾದ ಸಚಿನ್ ಶೆಣೈ, ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್, ಪ್ರಾಂಶುಪಾಲರಾದ ಎಮ್. ದೇವಿಚರಣ್ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ, ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.