ಪುತ್ತೂರು:ವಿವೇಕಾನಂದ ಕನ್ನಡ ಶಾಲೆಯಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಶಾಲೆಗೆ ಹೊಸ ಸೇರ್ಪಡೆಗೊಂಡಿರುವ ಹಾಗೂ ಮರು ಸೇರ್ಪಡೆಗೊಂಡಿರುವ ಮಕ್ಕಳ ಹಾಗೂ ಅವರ ಪೋಷಕರಿಗೆ ಶಾಲಾ ಪುನರಾರಂಭದಂದು ಗಣಹೋಮ ನಡೆಸಿ ಸ್ವಾಗತಿಸಲಾಯಿತು.

ಶಾಲಾ ಸಹಶಿಕ್ಷಕಿ ಶಾಲಿನಿ ಮತ್ತು ಸಂದೇಶ್ ಮಯ್ಯ ದಂಪತಿಗಳು ಪ್ರಧಾನರ್ಚಕರ ಸಮ್ಮುಖದಲ್ಲಿ ದೈವೀ ಕಾರ್ಯ ನೆರವೇರಿಸಿದರು. ಬಂದಂತಹ ಮಕ್ಕಳಿಗೆ ತಿಲಕವಿರಿಸಿ ಆರತಿ ಬೆಳಗಿ ಶುಭ ಕೋರಲಾಯಿತು. ಶಾಲಾ ಆಡಳಿತ ಮಂಡಳಿ, ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.