ಪುತ್ತೂರು: ಪುತ್ತೂರಿನ ಹೃದಯಭಾಗದ ಶ್ರೀ ಧರ್ಮಸ್ಥಳ ಕಟ್ಟಡದ ಎರಡನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 2025-26ನೇ ಸಾಲಿಗೆ ದಾಖಲಾತಿ ಹೊಂದಿದ ನೂತನ ವಿದ್ಯಾರ್ಥಿಗಳನ್ನು ಇಂದು (ಜೂ.2) ಸಂಸ್ಥೆ ವತಿಯಿಂದ ಸ್ವಾಗತಿಸಲಾಯಿತು.
ನೂತನ ಶೈಕ್ಷಣಿಕ ವರ್ಷದ ತರಗತಿಗಳನ್ನು ದೀಪ ಪ್ರಜ್ವಲಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಚಾಲಕ ಪಿ ವಿ ಗೋಕುಲ್ನಾಥ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳೆಂದೂ ಸೋತವರಲ್ಲ, ನೀವು ನಿರಾಶವಾದಿಗಳಾಗಬಾರದು, ಸೋಲನ್ನು ಸವಾಲಾಗಿ ಸ್ವೀಕರಿಸಿ ಯಶಸ್ಸು ಕಾಣಬೇಕು ಎಂದು ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸಂಸ್ಥೆ ನಡೆದು ಬಂದ ದಾರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಸಂಸ್ಥೆಯ ಎಲ್ಲಾ ಉಪನ್ಯಾಸಕರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ಕಳೆದ ವರ್ಷದ ಶೈಕ್ಷಣಿಕ ಪ್ರಗತಿಗೆ ಕಾರಣೀಭೂತರಾದ ಉಪನ್ಯಾಸಕರನ್ನು ಅಭಿನಂದಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್ನಾಥ್ ವಿದ್ಯಾರ್ಥಿಗಳು ಶಾಲೆಯಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ನೂತನ ವರ್ಷದಲ್ಲಿ ಮಂಗಳೂರು, ಕೊಡಗು, ಚಿಕ್ಕಮಂಗಳೂರು, ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಮಂಡ್ಯ, ಹಾಸನ, ಚಾಮರಾಜನಗರ, ಹುಬ್ಬಳ್ಳಿ, ಶಿವಮೊಗ್ಗ, ಬಳ್ಳಾರಿ, ಉಡುಪಿ, ನೆರೆಯ ಕಾಸರಗೋಡಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ದಾಖಲಾತಿ ಪಡೆದಿದ್ದು, ಮುಖ್ಯ ಶಿಕ್ಷಕಿ ಪ್ರಮೀಳಾ ಎನ್.ಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕ ವೃಂದ, ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಲಶ್ವಿತ್ ಕುಮಾರ್ ಪ್ರಾರ್ಥಿಸಿದರೆ, ಅರ್ಥಶಾಸ್ತ್ರ ಉಪನ್ಯಾಸಕ ನಾಝಿರ್ ಕಾರ್ಯಕ್ರಮ ನಿರೂಪಿಸಿದರು.
