ಪುತ್ತೂರು: ನೆಹರು ನಗರದಲ್ಲಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ, ಆಶ್ಲೇಷ ಭಟ್ ಪುರೋಹಿತರ ನೇತೃತ್ವದಲ್ಲಿ ನಡೆದ ಗಣಪತಿ ಹವನದ ಮೂಲಕ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ನೆರವೇರಿತು.

ಪುರೋಹಿತರು, ಮಕ್ಕಳ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ಶುಭ ಆಶೀರ್ವಚನ ನೀಡಿ ಶುಭ ಹಾರೈಸಿದರು. ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿ, ಪನ್ನೀರು ಚಿಮುಕಿಸಿ, ಕುಂಕುಮವನ್ನಿಟ್ಟು, ಪ್ರಸಾದ ಹಾಗೂ ಸಿಹಿಯನ್ನಿತ್ತು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ವಸಂತಿ ಕೆ, ಸಂಚಾಲಕರಾದ ಭರತ್ ಪೈ, ಖಜಾಂಜಿ ವಿಜಯಾನಂದ ಕೈಂತಜೆ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶಂಕರಿ ಶರ್ಮ, ಶೈಕ್ಷಣಿಕ ಸಲಹೆಗಾರರಾದ ಅನುರಾಧ ಶಿವರಾಮ್, ಶಾಲಾ ಪ್ರಾಂಶುಪಾಲರಾದ ಸಿಂಧು ವಿ.ಜಿ, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.