ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಪ್ರಮುಖ್ ಎಸ್.ಮಾಧವ ರೈಯವರ ಉತ್ತರಕ್ರಿಯೆ, ಶ್ರದ್ಧಾಂಜಲಿ ಅರ್ಪಣೆ

0

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಒಳಮೊಗ್ರು ಗ್ರಾಮದ ಬೂತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಶಕ್ತಿಕೇಂದ್ರದ ಪ್ರಮುಖ್‌ರಾಗಿದ್ದ ಎಸ್.ಮಾಧವ ರೈ ಕುಂಬ್ರರವರು ಇತ್ತೀಚಿಗೆ ನಿಧನ ಹೊಂದಿದ್ದು ಅವರ ಉತ್ತರಕ್ರಿಯಾಧಿ ಸದ್ಗತಿ ಕಾರ್ಯಕ್ರಮ ಜೂ.2 ರಂದು ಪರ್ಪುಂಜ ಶಿವಕೃಪಾ ಅಡಿಟೋರಿಯಂನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಎಸ್.ಮಾಧವ ರೈಯವರ ತಾಯಿ ಸುಂದರಿ, ಪತ್ನಿ ಆಶಾಲತಾ ರೈ ಹಾಗೂ ಸಹೋದರಿಯರು, ಕುಟುಂಬಸ್ಥರು, ಬಂಧು ಮಿತ್ರರು, ಹಿತೈಷಿಗಳು, ಬಿಜೆಪಿಯ ಮುಖಂಡರು, ರಾಜಕೀಯ ನೇತಾರರು, ಕುಂಬ್ರ ವರ್ತಕರ ಸಂಘದ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.


ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರರವರು ನುಡಿನಮನ ಸಲ್ಲಿಸುತ್ತಾ, ರಾಜಕೀಯವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರೀಯ, ಪ್ರಾಮಾಣಿಕ ಕಾರ್ಯಕರ್ತರಾಗಿ ಸೇವೆ ಮಾಡುವ ಮೂಲಕ ರಾಜಕೀಯ ರಹಿತವಾಗಿ ಪ್ರತಿಯೊಬ್ಬರಲ್ಲೂ ಆತ್ಮೀಯವಾಗಿ ಸದಾ ನಗುಮೊಗದಿಂದಲೇ ಬೆರೆಯುತ್ತಿದ್ದ ಸ್ನೇಹ ಜೀವಿಯಾಗಿದ್ದರು ಎಸ್.ಮಾಧವ ರೈಯವರು. ಅಗಲಿಕೆ ಪಕ್ಷಕ್ಕೆ ಹಾಗೇ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ. ರಾಜಕೀಯವಲ್ಲದೆ ಸನಾತನ ಧರ್ಮ ಸೇರಿದಂತೆ ಧಾರ್ಮಿಕ ಕ್ಷೇತ್ರದಲ್ಲೂ ಬಹಳಷ್ಟು ಸೇವೆ ಮಾಡಿದವರಾಗಿದ್ದಾರೆ. ಅಗಲಿದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ, ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ದಯಪಾಲಿಸಲಿ ಎಂದು ಹೇಳಿ ನುಡಿನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ, ಉದ್ಯಮಿ ಬೂಡಿಯಾರ್ ರಾಧಾಕೃಷ್ಣ ರೈ, ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಂಡಲ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ಯತೀಂದ್ರ ಕೊಚ್ಚಿ, ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೃಷಿಕ ಕಡಮಜಲು ಸುಭಾಷ್ ರೈ, ನೆ.ಮುಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಟೆಲಿಕಾಂ ಜಿಲ್ಲಾ ಸಲಹಾ ಸಮಿತಿ ಸದಸ್ಯ ನಿತೀಶ್ ಕುಮಾರ್ ಶಾಂತಿವನ, ಆರ್ಯಾಪು ಮಹಾಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಬಿ.ಎಸ್, ಎಸ್.ಟಿ ಮೋರ್ಛಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಡಾ. ಹರ್ಷ ಕುಮಾರ್ ರೈ ಮಾಡಾವು, ರವೀಂದ್ರನಾಥ ರೈ ಬಳ್ಳಮಜಲು, ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ, ಲೋಕೇಶ್ ಚಾಕೋಟೆ, ರಾಧಾಕೃಷ್ಣ ಬೋರ್ಕರ್, ಮೀನಾಕ್ಷಿ ಮಂಜುನಾಥ್, ಪುರುಷೋತ್ತಮ ಮುಂಗ್ಲಿಮನೆ, ಗುತ್ತಿಗೆದಾರ ರಾಜೇಂದ್ರ ಕುಮಾರ್, ರಾಧಾಕೃಷ್ಣ ರೈ ಕುರಿಯ ಏಳ್ನಾಡುಗುತ್ತು, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ, ರತನ್ ರೈ ಕುಂಬ್ರ, ರಕ್ಷಿತ್ ರೈ, ವಿನೋದ್ ಶೆಟ್ಟಿ, ರೇಖಾ ಯತೀಶ್, ಪ್ರದೀಪ್, ನಳಿನಾಕ್ಷಿ, ನಿಮಿತಾ ರೈ, ಶೀನಪ್ಪ ನಾಯ್ಕ, ಮಹೇಶ್ ರೈ ಕೇರಿ, ಶಿವರಾಮ ಗೌಡ ಬೊಳ್ಳಾಡಿ, ಅಮರನಾಥ ರೈ ಕೈಕಾರ, ಸೂರ್ಯನಾರಾಯಣ ಭಟ್, ಪಿ.ಕೆ ಮಹಮ್ಮದ್ ಕೂಡುರಸ್ತೆ, ಮೋನಪ್ಪ ಪೂಜಾರಿ ಬಡಕ್ಕೋಡಿ, ಸಂಶುದ್ದೀನ್ ಎ.ಆರ್, ಗುತ್ತಿಗೆದಾರ ಯುವರಾಜ್ ಶೆಟ್ಟಿ ಮೇರ್ಲ, ಅರುಣ್ ರೈ ಬಿಜಳ, ಸುಧಾಕರ ರೈ ಕುಂಬ್ರ, ರಾಧಾಕೃಷ್ಣ ರೈ ಅಲಂಗೂರು ಸೇರಿದಂತೆ ಶಾಲಾ ಕಾಲೇಜು ಶಿಕ್ಷಕ ವೃಂದದವರು, ಸ್ಥಳೀಯ ಬ್ಯಾಂಕ್, ಸೊಸೈಟಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಸ್.ಮಾಧವ ರೈಯವರ ಹಿತೈಷಿಗಳು, ಬಂಧು ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here