ಕೆಯ್ಯೂರು: ಮನೆ ಹಾನಿ ವೀಕ್ಷಣೆಗೆ ತೆರಳಿದ್ದ ಮಾಜಿ ಗ್ರಾ.ಪಂ. ಸದಸ್ಯರ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು

0

ಪುತ್ತೂರು: ಕೆಯ್ಯೂರು ಗ್ರಾಮದಲ್ಲಿ ಗಾಳಿಮಳೆಯಿಂದ ಹಾನಿಗೊಳಗಾದ ಮನೆಯನ್ನು ವೀಕ್ಷಿಸಲು ತೆರಳಿದ್ದ ಕೆಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಅವರೊಂದಿಗೆ ತೆರಳಿದ ಇಬ್ಬರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಯ್ಯೂರು ಗ್ರಾಮದ ನಿವಾಸಿ, ಉದ್ಯಮಿ ಹಾಗೂ ಕೆಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಹನೀಫ್‌ ಕೆ.ಎಂ. ಅವರು ದೂರು ನೀಡಿದ್ದು, ಅವರು ನೀಡಿದ ದೂರಿನ ಅನ್ವಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಾರೀಸ್ ಎಂಬವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಕಲಂ 126(2), 115(2) ಹಾಗೂ 352 ರ ಅಡಿಯಲ್ಲಿ ಪ್ರಕರಣ (ಅಪರಾಧ ಕ್ರಮಾಂಕ: 62/2025) ದಾಖಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here