ಬಡಗನ್ನೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಬಡಗನ್ನೂರು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಸಿಹಿ ವಿತರಣೆ ಹಾಗೂ ಪಠ್ಯ ಪುಸ್ತಕ ನೀಡಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಮೆರವಣಿಗೆಯ ಮೂಲಕ ಘೋಷಣೆಗಳನ್ನು ಕೂಗುತ್ತಾ, ಬ್ಯಾಂಡ್ ವಾದ್ಯ ಘೋಷದೊಂದಿಗೆ ಶಾಲೆಗೆ ಬರ ಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸೇರ್ಪಡೆಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ಗೌಡ ಶುಭ ಹಾರೈಸಿದರು. ಉಪಾಧ್ಯಕ್ಷರಾದ ಸತೀಶ್ ನಾಯ್ಕ, ಪಠ್ಯ ಪುಸ್ತಕ ವಿತರಿಸಿದರು. ಮುಖ್ಯಗುರುಗಳಾದ ಪುಷ್ಪಾವತಿ ಎಂ ಬಿ ಯವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಮಕ್ಕಳ ರಕ್ಷಣಾ ಸಮಿತಿ ಹಾಗೂ ತಾಯಂದಿರ ಸಮಿತಿ ರಚಿಸಲಾಯಿತು. ಸಮಿತಿಯ ಜವಾಬ್ದಾರಿಗಳನ್ನು ಸಭೆಗೆ ತಿಳಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯರು ಪೋಷಕರು ಹಾಗೂ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪದವೀಧರ ಶಿಕ್ಷಕಿಯಾದ ಸೌಮ್ಯ ಬಿ ಪ್ರಾರ್ಥಿಸಿ, ಅತಿಥಿ ಶಿಕ್ಷಕಿಯಾದ ಸರಳ ವಂದಿಸಿ, ಸಹಶಿಕ್ಷಕರಾದ ಗಿರೀಶ ಡಿ. ಕಾರ್ಯಕ್ರಮ ನಿರೂಪಿಸಿದರು.