ಮಿತ್ತೂರು ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.

ಶಾಲೆಗೆ ಹೊಸದಾಗಿ ದಾಖಲಾದ ಮಕ್ಕಳನ್ನು ಬ್ಯಾಂಡ್ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ನಡೆದ ಸಮಾರಂಭದಲ್ಲಿ ಮಕ್ಕಳಿಗೆ ಹೂ, ಪೆನ್ನು, ಪುಸ್ತಕ ನೀಡಿ ಸ್ವಾಗತಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು ಈ ವರ್ಷದ ಧ್ಯೇಯ ವಾಕ್ಯದಂತೆ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ ಎಂಬಂತ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುತ್ತಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಬೀಡಿನಮಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಲೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಾಲೆಯಲ್ಲಿ ಉತ್ತಮ ವ್ಯವಸ್ಥೆ ಇದ್ದು, ಕಲಿಕೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗುತ್ತಿರುವುದು ಊರಿಗೆ ಹೆಮ್ಮೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆದ೦ MMS ದಯಾನಂದ ಕುವೆತ್ತಿಲ, ಅನಿಲ್ ಕುಮಾರ್ ಅಳಕೆಮಜಲು ಮತ್ತು ಬಾಲಕೃಷ್ಣ ಶೆಟ್ಟಿ ನೇರಳಕಟ್ಟೆ ರವರುಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಪೂಜಾರಿ ಸೂರ್ಯ, ಗುತ್ತಿಗೆದಾರರಾದ ಮಾರ್ಷಲ್ ಪಾಯಸ್, ಪ್ರಮುಖರಾದ ನಾಸಿರ್ ಕೋಲ್ಪೆ, ಹಿರಿಯ ವಿದ್ಯಾರ್ಥಿ ಸಾದಿಕ್ ಅಕ್ಕರೆ, SDMC ಸದಸ್ಯರುಗಳಾದ ಶಶಿಪ್ರಭಾ, ದಾಮೋದರ, ಸುಮತಿ , ಸೌಮ್ಯ ಯಶೋಧರ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಸರೋಜಾ ಎ. ಸ್ವಾಗತಿಸಿ, ಜೂಲಿಯಾನ ಮೇವಿಸ್ ರವರು ವಂದಿಸಿದರು. ಸಂಜೀವ ಎನ್.ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here