ಪುತ್ತೂರು : ಸ.ಹಿ.ಪ್ರಾ.ಶಾಲೆ “ನಮ್ಮ ಶಾಲೆ ಸಾಮೆತ್ತಡ್ಕ ” ಶಾಲಾ ಪ್ರಾರಂಭೋತ್ಸವ ಜೂ.2 ರಂದು ನಡೆಯಿತು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸಾದ್ ಬ್ಯಾಂಡ್ ಬಾರಿಸುವ ಮೂಲಕ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿದರು. ನಗರ ಸಭಾ ಸದಸ್ಯ ಮನೋಹರ್ ಕಲ್ಲಾರೆ ಸರಕಾರದಿಂದ ಸಿಗುವ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಚಾಲನೆ ನೀಡಿ, ಹಾರೈಸಿದರು.

ಜೆಸಿಐ ವತಿಯಿಂದ ಮಕ್ಕಳ ಪೋಷಕರಿಗೆ ತರಬೇತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮವನ್ನು ಜೆಸಿಐ ಇದರ ಅಧ್ಯಕ್ಷ, ಲಯನ್ಸ್ ಇದರ ಕಾರ್ಯದರ್ಶಿ ಹಾಗೂ ವಿದ್ಯಾಮಾತ ಅಕಾಡೆಮಿಯ ಮುಖ್ಯಸ್ಥರಾದ ಭಾಗ್ಯೇಶ್ ರೈ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾಭಿಮಾನಿಯಾಗಿರುವ ದಿನೇಶ್ ಕಾಮತ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪವಿತ್ರ, “ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷರಾಗಿರುವ ವೆಂಕಟ್ ರಾಜ್, ಟ್ರಸ್ಟಿ ರವೀಂದ್ರ ಹೆಗ್ಡೆ, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಝ್ ಹಾಗೂ ಶಿಕ್ಷಕ ವೃಂದ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಮರಿಯಾ ಎಂ.ಎ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.