ಕಾಣಿಯೂರು: ಕಾಣಿಯೂರು ಸ.ಉ.ಹಿ. ಪ್ರಾ ಶಾಲಾ ಪ್ರಾರಂಭೋತ್ಸವವು ಜೂ 2ರಂದು ಆಚರಿಸಲಾಯಿತು.

ಮೆರವಣಿಗೆಯಲ್ಲಿ ಸಾಗಿ ಬಂದ ವಿದ್ಯಾರ್ಥಿಗಳನ್ನು ಆರತಿ ಬೆಳಗುವ ಮೂಲಕ ಬರಮಾಡಿ ಕೊಳ್ಳಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿವೃತ್ತಗೊಂಡ ಕಾಣಿಯೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೋಹಿಣಿ ಸುವರ್ಣ ಅಬೀರ ಅವರನ್ನು ಸನ್ಮಾನಿಸಲಾಯಿತು. ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಮಾದೋಡಿ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋದ ನೇರೋಳ್ತಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಶ್ರೀ ಉಪಸ್ಥಿತರಿದ್ದರು.
ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗೂರು ಬಾಲಕೃಷ್ಣ ಕೆ ಪ್ರಾಸ್ತವಿಕದೊಂದಿಗೆ ಸ್ವಾಗತಿಸಿದರು. ಶಿಕ್ಷಕಿಯರಾದ ವೀಕ್ಷಿತಾ ವಂದಿಸಿ, ಸುಜಯ ಕಾರ್ಯಕ್ರಮ ನಿರೂಪಿಸಿದರು.