ವಿಟ್ಲ: ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ. ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾತನಾಡಿ ರಕ್ಷಕ-ಶಿಕ್ಷಕ ಸಂಘದ ರಚನಾ ಕಾರ್ಯವನ್ನು ನಡೆಸಿಕೊಟ್ಟರು.
ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಮೊಹಮ್ಮದ್ ಯಾಸಿರ್, ಸದಸ್ಯರುಗಳಾಗಿ ಮೌನೇಶ್ ವಿಶ್ವಕರ್ಮ, ದಿನಕರ ಪೂಜಾರಿ, ಸಮೀದ ಹಾಗೂ ಶೋಭಾ ಎಂ ಶೆಟ್ಟಿ ಯನ್ನು ಪೋಷಕರು ಸರ್ವಾನುಮತದಿಂದ ಆಯ್ಕೆ ಮಾಡಿದರು. ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ ಸ್ವಾಗತಿಸಿ,
ಸಹ ಶಿಕ್ಷಕಿ ಲೀಲಾ ಮಯ್ಯ ಕಾರ್ಯಕ್ರಮ ನಿರೂಪಿಸಿದರು.